ವಿಷ ಸೇವಿಸಿ ಕೂಲಿ ಕಾರ್ಮಿಕ ಆತ್ಮಹತ್ಯೆ
ಶ್ರೀರಂಗಪಟ್ಟಣ, ಅ.10: ತಾಲೂಕಿನ ಹಂಗರಹಳ್ಳಿ ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಕೂಲಿ ಕಾರ್ಮಿಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವ ಧಾರವಾಡ ಮೂಲದ ಕರಿಯಪ್ಪ(35) ಎಂದು ಗುರುತಿಸಲಾಗಿದ್ದು, ಗಣಿಗಾರಿಕೆ ಮಾಲಕ ಮತ್ತು ಕರಿಯಪ್ಪ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.
ಮಂಗಳವಾರ ಸಂಜೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕರಿಯಪ್ಪನನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story