ಹನೂರು: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಚಾಲನೆ
ಹನೂರು,ಅ.12: ಚನ್ನಾಲಿಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರರಾಜುಗೌಡ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಕಳೆದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯ ಚನ್ನಾಲಿಂಗನಹಳ್ಳಿ ಸೇರಿದಂತೆ ಕಳ್ಳಿದೊಡ್ಡಿ, ಕೊತ್ತನೂರು, ಹುತ್ತೂರು ಹಾಗೂ ಬೂದುಬಾಳು ಒಟ್ಟು 5 ಗ್ರಾಮಗಳು ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಗೆ ಆಯ್ಕೆಯಾಗಿದ್ದವು. ಅದರಂತೆ ಕೆಲವು ಗ್ರಾಮಗಳಲ್ಲಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಚುನಾವಣೆ ಬಂದ ಹಿನ್ನಲೆ ಇನ್ನುಳಿದ ಗ್ರಾಮಗಳಲ್ಲಿ ಚಾಲನೆ ನೀಡಲಾಗಿರಲಿಲ್ಲ. ಈ ದಿಸೆಯಲ್ಲಿ ಈ ಯೋಜನೆಯಡಿ ಚನ್ನಾಲಿಂಗನಹಳ್ಳಿ ಗ್ರಾಮದಲ್ಲಿ ಶಿಲಾನ್ಯಾಸ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಮರಗದಮಣಿ, ಡಿ.ಲೇಖಾ, ತಾಪಂ ಅಧ್ಯಕ್ಷ ಆರ್.ರಾಜು, ಸದಸ್ಯೆ ಮಾಣಿಕ್ಯ ಪುಟ್ಟರಾಜು, ಮುಖಂಡರಾದ ಮಹದೇವಸ್ವಾಮಿ, ಮಂಗಲ ಪುಟ್ಟರಾಜು, ಕೆ.ಸಿ ಮಾದೇಶ್, ರವಿಕುಮಾರ್ ಹಾಗೂ ಕೆಆರ್ಐಡಿಎಲ್ ಅಧಿಕಾರಿಗಳು ಹಾಗೂ ಇನ್ನಿತರರಿದ್ದರು.