ಅ.14: ಮೇಲ್ಮನೆ ಸದಸ್ಯ ಎಂ.ಸಿ.ವೇಣುಗೋಪಾಲ್ಗೆ ಸನ್ಮಾನ
ಬೆಂಗಳೂರು, ಅ. 13: ಇತ್ತೀಚೆಗೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಮೇಲ್ಮನೆ ಸದಸ್ಯ ಎಂ.ಸಿ.ವೇಣು ಗೋಪಾಲ್ ಅವರಿಗೆ ಜಯನಗರ ನಾಗರಿಕ ವೇದಿಕೆ ನಾಳೆ(ಅ.14) ಸನ್ಮಾನ ಸಮಾರಂಭ ಏರ್ಪಡಿಸಿದೆ.
ಶನಿವಾರ ಪ್ರಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವಿತಾ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ, ಜಯನಗರದ ಪೂರ್ಣಿಮಾ ಕನ್ವೆನ್ಷನ್ ಹಾಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೇಯರ್ ಗಂಗಾಬಿಕೆ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
Next Story