ಜಮಖಂಡಿ, ಬಳ್ಳಾರಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಬಗ್ಗೆ ಮೊದಲೇ ತೀರ್ಮಾನ ಆಗಿತ್ತು : ಡಾ.ಜಿ.ಪರಮೇಶ್ವರ್
ಉಪ ಚುನಾವಣೆ
ಬೆಂಗಳೂರು, ಅ. 14: ಉಪ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟು, ಜಮಖಂಡಿ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಬಗ್ಗೆ ಮೊದಲೇ ತೀರ್ಮಾನ ಆಗಿತ್ತು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರವಿವಾರ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಇಬ್ಬರಿಗೂ ಸಮಾನ ಅವಕಾಶವಿದ್ದು, ಜೆಡಿಎಸ್ ಸ್ಪರ್ಧೆ ಮಾಡುತ್ತೇವೆಂದು ಹೇಳಿದ್ದು ಅವರಿಗೆ ಬಿಟ್ಟು ಕೊಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಸಂಬಂಧ ಸಂಜೆಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದರು.
Next Story