ಮಂಡ್ಯ: ಹಾವು ಕಡಿದು ರೈತ ಸಾವು
ಮಂಡ್ಯ, ಅ.15: ಹಿಪ್ಪುನೇರಳೆ ಸೊಪ್ಪು ಕೊಯ್ಯುವಾಗ ಹಾವು ಕಡಿದು ರೈತ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕು ದೊಡ್ಡಚನ್ನಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಮಾದು(35) ಮೃತಪಟ್ಟ ರೈತನಾಗಿದ್ದು, ಇವರು ಯತ್ತಂಬಾಡಿ ಅಕ್ಕನವರ ತೋಟದಲ್ಲಿ ಹಿಪ್ಪುನೇರಳೆ ಸೊಪ್ಪು ಕೊಯ್ಯುವಾಗ ಘಟನೆ ಸಂಭವಿಸಿದೆ. ಹಾವು ಕಚ್ಚಿ ಅಸ್ವಸ್ಥಗೊಂಡ ಪುಟ್ಟಮಾದು ಅವರನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆಯಿತು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪುಟ್ಟಮಾದು ಕಚ್ಚಿದ ಹಾವನ್ನು ಕುಡುಗೋಲಿನಿಂದ ಕತ್ತರಿಸಿ ಕೊಂದಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story