ಸಿಎಂ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ: ಲೋಕಸಭಾ ಉಪಚುನಾವಣೆ ಕುರಿತು ಚರ್ಚೆ
ಮೈಸೂರು,ಅ.17: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮಂಗಳವಾರ ತಡರಾತ್ರಿಯವರೆಗೂ ಮೈಸೂರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಉಪಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ.
ನಗರದ ಹೊರ ವಲಯದಲ್ಲಿರುವ ಸೈಲೆಂಟ್ ಶೋರ್ಸ್ ರೆಸಾರ್ಟ್ ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಮುಗಿಸುವ ಕುರಿತು ರೂಪುರೇಷೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸೂಚನೆಯಂತೆ ನಡೆದ ಸಭೆಯಲ್ಲಿ ಜೆಡಿಎಸ್ ನ ಬಹುತೇಕ ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಶಾಸಕರಿಗೂ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಔತಣಕೂಟ ಏರ್ಪಡಿಸಿದ್ದರು ಎನ್ನಲಾಗಿದೆ.
Next Story