ಕಲ್ಲುಗಣಿಗಾರಿಕೆ ಶಾಶ್ವತ ನಿಷೇಧಿಸದಿದ್ದರೆ ಉಗ್ರ ಹೋರಾಟ: ಯಡಿಯೂರಪ್ಪ ಎಚ್ಚರಿಕೆ
ಪಾಂಡವಪುರದಲ್ಲಿ ಚುನಾವಣಾ ಪ್ರಚಾರ ಸಭೆ
ಮಂಡ್ಯ, ಅ.23: ಕೆಆರ್ಎಸ್ ಅಣೆಕಟ್ಟೆಗೆ ಅಪಾಯವಿರುವ ಪಾಂಡವಪುರ ತಾಲೂಕು ಬೇಬಿಬೆಟ್ಟ ಸುತ್ತಮುತ್ತಲ ಪ್ರದೇಶದ ಕಲ್ಲುಗಣಿಗಾರಿಕೆಯನ್ನು ಶಾಶ್ವತ ನಿಷೇಧಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಮಂಡ್ಯ ಲೋಕಸಭಾ ಉಪಚುನಾವಣೆ ಸಂಬಂಧ ಪಾಂಡವಪುರದಲ್ಲಿ ಮಂಗಳವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಉಪಚುನಾವಣೆ ಮುಗಿದ ಬಳಿಕ ಜಿಲ್ಲೆಯ ಜನರ ಜತೆ ನಿಂತು ಗಣಿಗಾರಿಕೆ ವಿರುದ್ಧ ನಾನೇ ಉಗ್ರ ಹೋರಾಟ ನಡೆಸುವೆ ಎಂದರು.
ಗಣಿಗಾರಿಕೆಯಿಂದ ಕೆಆರ್ಎಸ್ ಅಣೆಕಟ್ಟೆಗೆ ಅಪಾಯವಿದೆ ಎಂದು ವರದಿಯಿದ್ದರೂ ನಿಷೇಧಿಸಿಲ್ಲ. ಈ ಹಿಂದೆ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಬಿಜೆಪಿ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಿಂದ ಪಾಂಡವಪುರ ಎಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದೆ. ಇಷ್ಟಾದರೂ ಗಣಿಗಾರಿಕೆ ನಿಂತಿಲ್ಲವೆಂದರೆ ಅಧಿಕಾರಿಗಳು ಸಚಿವ ಪುಟ್ಟರಾಜು ಕೈಗೊಂಬೆಯಾಗಿದ್ದಾರೆಂಬುದು ಸ್ಪಷ್ಟ ಎಂದು ಅವರು ಆರೋಪಿಸಿದರು.
Next Story