ಸಾಲಬಾಧೆ: ರೈತ ಆತ್ಮಹತ್ಯೆ
ಮಂಡ್ಯ, ಅ.23: ತಾಲೂಕಿನ ಕಲ್ಮಂಟಿದೊಡ್ಡಿ ಗ್ರಾಮದ ರೈತ ಸಂತೋಷ್ಕುಮಾರ್ ಎಂಬುವರು ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂತೋಷ್ಕುಮಾರ್ ವಿವಿಧ ಬ್ಯಾಂಕುಗಳಲ್ಲಿ ಸುಮಾರು 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಕಾರ್ಖಾನೆಯಿಂದ ಸಕಾಲಕ್ಕೆ ಕಬ್ಬಿನ ಬಾಕಿ ಹಣ ಪಾವತಿಯಾಗಿರಲಿಲ್ಲ ಎಂದು ತಿಳಿದು ಬಂದಿದೆ.
ಸೋಮವಾರ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಸಂತೋಷ್ ಕುಮಾರ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story