ಮಂಡ್ಯ: ಆಸ್ತಿ ವಿವಾದ; ಅಣ್ಣನಿಂದ ತಮ್ಮನ ಹತ್ಯೆ
ಮಂಡ್ಯ, ಅ.25: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಮರಲಿಂಗನದೊಡ್ಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ದೀಪಕ್ ಕುಮಾರ್ (36) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿ ಸಹೋದರ ಸದಾಶಿವ ಸ್ಥಳದಿಂದ ಪರಾರಿಯಾಗಿದ್ದಾನೆ. ಮುಂಜಾನೆ ಮನೆಯಿಂದ ಹೊರಬಂದ ದೀಪಕ್ ಕುಮಾರನನ್ನು ಹೊಂಚುಹಾಕಿ ಕುಳಿತಿದ್ದ ಸದಾಶಿವ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಅಡ್ಡಬಂದ ತಾಯಿ ನಿಂಗಮ್ಮ ಹಾಗೂ ಸುರೇಶ್ ಎಂಬುವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.
Next Story