ಹೃದಯಾಘಾತ: ಬೈಕ್ನಿಂದ ಬಿದ್ದು ಸವಾರ ಸಾವು
ಮಂಡ್ಯ, ಅ.29: ಹೃದಯಾಘಾತಕ್ಕೊಳಗಾದ ವ್ಯಕ್ತಿ ಬೈಕ್ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಭೀಮನಕೆರೆ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ ಕರಿಯಣ್ಣ ಅವರ ಪುತ್ರ ಬಸವರಾಜು(35) ಸಾವನ್ನಪ್ಪಿದ ವ್ಯಕ್ತಿ. ಕಾರ್ಯನಿಮಿತ್ತ ಹೊನ್ನಲಗೆರೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ತೀವ್ರ ಹೃದಯಾಘಾತಕ್ಕೊಳಗಾದ ಬಸವರಾಜು ಬೈಕ್ನಿಂದ ಕುಸಿದು ಬಿದ್ದಿದ್ದು, ತಕ್ಷಣ ಗ್ರಾಮಸ್ಥರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎನ್ನಲಾಗಿದೆ.
ಮೃತರಿಗೆ ಪತ್ನಿ ಇಬ್ಬರು ಮಕ್ಕಳಿದ್ದಾರೆ. ಸಂಜೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿತು.
Next Story