ಮಂಡ್ಯ: ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
ಮಂಡ್ಯ, ನ.7: ಶಿಂಷಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮುಳುಗಿ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ನಡೆದಿದೆ.
ಕನಕಪುರ ತಾಲೂಕಿನ ಸೀಗೆಕೋಟೆ ಗ್ರಾಮದ ಗೋಪಿಕೃಷ್ಣ ಮೃತ ದುರ್ದೈವಿ. ಈತ ಮಂಗಳವಾರ ಮಧ್ಯಾಹ್ನ ಈಜುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ವಿಚಾರ ತಿಳಿದ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದು ವಾರಸುದಾರರಿಗೆ ಒಪ್ಪಿಸಿದರು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story