ಸಾಲಬಾಧೆ: ರೈತ ಆತ್ಮಹತ್ಯೆ
ಮಂಡ್ಯ, ನ.10: ಸಾಲಭಾದೆ ತಾಳಲಾರದೆ ಮನನೊಂದ ಯುವ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಂಡವಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ವಿ.ಕೆ.ಹರೀಶ್ (32) ಆತ್ಮಹತ್ಯೆ ಮಾಡಿಕೊಂಡವರು. ಇವರು ಚಿನ್ನಾಭರಣಗಳನ್ನು ಅಡಮಾನವಿಟ್ಟು ಕೆನ್ನಾಳು ಗ್ರಾಮದಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಹಾಗೂ ಮುತ್ತೂಟ್ ಫೈನಾನ್ಸ್ ಕಂಪೆನಿಯಲ್ಲಿ 3 ಲಕ್ಷ ರೂ.ಗಳವರೆಗೆ ಸಾಲ ಪಡೆದಿದ್ದರು ಎನ್ನಲಾಗಿದೆ.
ಸಾಲ ಪಾವತಿಸುವಂತೆ ಬ್ಯಾಂಕ್ ಹಾಗೂ ಫೈನಾನ್ಸ್ ಕಂಪೆನಿಯಿಂದ ನೊಟೀಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Next Story