ಕೋಲಾರ: ಪಿಎಸ್ಐ ಹೊನ್ನೇಗೌಡ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ
ಕೋಲಾರ, ನ. 17: ಪಿಎಸ್ಐ ಹೊನ್ನೇಗೌಡ ಅಮಾನತ್ತಿಗೆ ಆಗ್ರಹಿಸಿ ಕೋಲಾರದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಕೋಲಾರ ನಗರದ ನಚಿಕೇತನ ನಿಲಯದಿಂದ ರ್ಯಾಲಿ ನಡೆಸಿ ಮೆಕ್ಕೆ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಬೋವಿ ಜನಾಂಗವನ್ನು ತನ್ನ ವ್ಯಾಪ್ತಿಯಲ್ಲಿ ಇರಲು ಬಿಡುವುದಿಲ್ಲ ಎಂಬ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದರು. ಕೂಡಲೇ ಆತನನ್ನು ಸೇವೆಯಿಂದ ವಜಾ ಮಾಡಬೇಕು, ಕ್ರಮ ಜರುಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕೆಜಿಎಫ್ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಹೇಳಿದ್ದಾರೆ.
Next Story