ಮೈಸೂರು: ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ಆತ್ಮಹತ್ಯೆ
ಮೈಸೂರು,ನ.17: ಹೆಂಡತಿಯ ನಿಂದನೆಯಿಂದ ಮನನೊಂದ ಪತಿ ನೇಣಿಗೆ ಶರಣಾಗಿರುವ ಘಟನೆ ನಗರದ ಕೆಸರೆಯಲ್ಲಿ ನಡೆದಿದೆ.
ಮೃತನನ್ನು ಪ್ರಶಾಂತ್ (32) ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ. ಕಳೆದ 5 ವರ್ಷಗಳ ಹಿಂದೆ ನಗರದ ತೇಜಸ್ವಿನಿ ಎಂಬ ಯುವತಿಯನ್ನು ಮದುವೆಯಾಗಿದ್ದ. ಇವರಿಗೆ 4 ವರ್ಷದ ಹೆಣ್ಣು ಮಗು ಕೂಡ ಇದೆ. ಆದರೆ ಕಳೆದ ಕೆಲವು ದಿನಗಳಿಂದ ಸಂಸಾರದಲ್ಲಿ ಮನಸ್ತಾಪ ಉಂಟಾಗಿ ಈ ಕಲಹ ಪೊಲಿಸ್ ಠಾಣೆಯ ಮೆಟ್ಟಿಲೇರಿತ್ತು. ಇದರಿಂದ ಬೇಸರಗೊಂಡಿದ್ದ ಪ್ರಶಾಂತ್ ಬೇರೆ ವಾಸವಾಗಿದ್ದ. ನಿನ್ನೆ ಮಗುವನ್ನು ನೋಡಲು ಹೆಂಡತಿ ಮನೆಗೆ ಬಂದಿದ್ದ. ಈ ಸಂದರ್ಭದಲ್ಲಿ ಹೆಂಡತಿ ನಿಂದಿಸಿದಳು ಎನ್ನಲಾಗಿದ್ದು, ಇದರಿಂದ ಮನನೊಂದ ಈತ ಮನೆಗೆ ಹೋಗಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕುಟುಂಬಸ್ಥರು ಎನ್ ಆರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Next Story