ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ನ.21: 2018ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿಗೆ ಸೇರಿಸಬೇಕು. ವಿದ್ಯಾರ್ಥಿಯು ಸೇರಿದಂತೆ ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1, 2.50ಲಕ್ಷ ರೂ. ಹಾಗೂ ಪ್ರವರ್ಗ 2(ಎ), 3(ಬಿ)ಗೆ ಬರುವ ಸಮುದಾಯದ ಆದಾಯ ಮಿತಿ 1ಲಕ್ಷ ರೂ. ಒಳಗಿರಬೇಕು.
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನ.30 ಸಂಜೆ 5ಕ್ಕೆ ಅಂತಿಮ ದಿನವಾಗಿದೆ ಹಾಗೂ ನೇರವಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸುವವರು ಡಿ.1 ಅಂತಿಕ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.8050770004, bcwd.training@karnataka.gov.in, mailto:bcwd.training@karnataka.gov.in ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.