ಕೊಳ್ಳೇಗಾಲ: ನಿವೃತ್ತ ಅಧಿಕಾರಿ ನಂಜಯ್ಯ ನಿಧನ
ಕೊಳ್ಳೇಗಾಲ,ಡಿ.2: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಅಧಿಕಾರಿ ನಂಜಯ್ಯ (64) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೈಸೂರಿನ ಇಟ್ಟಿಗೆಗೂಡು ನಿವಾಸಿ ನಂಜಯ್ಯರವರು ಕೊಳ್ಳೇಗಾಲದ ತೋಟಾಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೆ ನಿವೃತ್ತಿ ಹೊಂದಿದ್ದರು.
ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗಾಗಿ ಮೈಸೂರಿನ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾದರು. ಸೋಮವಾರ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ನಂಜಯ್ಯರವರ ಭಾಮೈದ ನಗರಸಭೆ ಮಾಜಿ ಅಧ್ಯಕ್ಷ ಎಸ್.ರಮೇಶ್ ಅವರು ತಿಳಿಸಿದರು. ಇವರು ಪತ್ನಿ ಶಾರದಾ ಮತ್ತು ಇಬ್ಬರು ಗಂಡು ಮಕ್ಕಳನ್ನು ಸೇರಿದಂತೆ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ಮೈಸೂರಿನ ಇಟ್ಟಿಗೆಗೂಡಿನ ನಿವಾಸಕ್ಕೆ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್, ಸಂಸದ ಆರ್.ಧ್ರವನಾರಾಯಣ, ಮಾಜಿ ಶಾಸಕ ಎಸ್.ಜಯಣ್ಣ ಸೇರಿದಂತೆ ಅನೇಕ ಗಣ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.