ಬಸವ ವಿರಕ್ತ ಮಠದ ಪೀಠಾಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಚಿಕ್ಕಮಗಳೂರು, ಡಿ.6: ಚಿಕ್ಕಮಗಳೂರು ಬಸವ ವಿರಕ್ತ ಮಠದ ಪೀಠಾಧ್ಯಕ್ಷ ಜಯಬಸವಾನಂದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಪತ್ರಿಕೆಯೊಂದರಲ್ಲಿ ಸ್ವಾಮೀಜಿ ಅವರು ಮಹಿಳೆಯೊರ್ವರಿಗೆ ಲೈಂಗಿಕ ಕುರುಕುಳ ನೀಡಿದ್ದಾರೆ ಎಂಬ ವರದಿಯಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು, ಸತ್ಯಾಸತ್ಯತೆ ಹೊರಬರುವವರೆಗೂ ತಮ್ಮ ಸ್ಥಾನಕ್ಕೆ ಸ್ವಾಮೀಜಿ ಅವರು ರಾಜೀನಾಮೆ ನೀಡಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
Next Story