ಕೇಂದ್ರ ಸರಕಾರದ ರೈತ ವಿರೋಧಿ ನೀತಿಗೆ ತಕ್ಕ ಪಾಠ: ಕುಮಾರಸ್ವಾಮಿ
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ
ಬೆಳಗಾವಿ, ಡಿ.13: ಕೇಂದ್ರ ಸರಕಾರದ ರೈತ ವಿರೋಧಿ ನೀತಿಯಿಂದಾಗಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿಗೆ ಹೀನಾಯ ಸೋಲುಂಟಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರೈತರ ಸಾಲ ಮನ್ನಾ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಗೆಲುವಾಗಿದೆ ಎಂದರು. ಲೋಕಸಭಾ ಚುನಾವಣೆಯ ಸಮಯ ಹತ್ತಿರವಾಗಿದೆ. ಹೀಗಾಗಿ ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ. ಅವರು ರೈತರ ಸಾಲ ಮನ್ನಾ ಮಾಡಲೇಬೇಕಾಗಿದೆ. ನಮ್ಮ ದಾರಿಯಲ್ಲೇ ಅವರು ಹೋಗಬೇಕಾಗಿದೆ. ತಡವಾಗಿಯೇ ಆದರೂ ರೈತರ ಸಮಸ್ಯೆ ಅವರಿಗೆ ಅರ್ಥವಾಗಿದೆ ಎಂದು ಹೇಳಿದರು.
Next Story