ಶಿವಕುಮಾರ ಸ್ವಾಮೀಜಿಯನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ
ಬೆಂಗಳೂರು,ಡಿ.13: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಗುರುವಾರ ಚೆನ್ನೈನ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳನ್ನು ಭೇಟಿ ಮಾಡಿದ ಈಶ್ವರ್ ಖಂಡ್ರೆ, ಶ್ರೀ ಗಳ ಆರೋಗ್ಯ ಚೇತರಿಕೆ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದರು.
ರಾಜ್ಯ ಸರ್ಕಾರ ಶ್ರೀಗಳ ಜೊತೆಗಿದೆ. ಯಾವುದೇ ಸಹಕಾರವನ್ನು ಸರ್ಕಾರ ನೀಡಲು ಸಿದ್ಧ. ಶ್ರೀಗಳು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರ ಬಳಿ ಈಶ್ವರ್ ಖಂಡ್ರೆ ಮನವಿ ಮಾಡಿದರು.
Next Story