ಮಂಡ್ಯ: ಕೈಕಾಲು ಕಟ್ಟಿಹಾಕಿ ನಗನಾಣ್ಯ ದರೋಡೆ
ಮಂಡ್ಯ, ಡಿ.13: ಮನೆ ಮಾಲಕನ ಕೈಕಾಲು ಕಟ್ಟಿಹಾಕಿ, ಬಾಯಿಗೆ ಪ್ಲಾಸ್ಟರ್ ತುರುಕಿ ಮನೆಯಲ್ಲಿದ್ದ ನಗನಾಣ್ಯ ದೋಚಿರುವ ಘಟನೆ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿವೃತ್ತ ನೌಕರ ಕೃಷ್ಣೇಗೌಡ ಅವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, 50 ಸಾವಿರ ನಗದು ಹಾಗೂ 50 ಗ್ರಾಂ ಚಿನ್ನಾಭರಣ ದೋಚಲಾಗಿದೆ ಎನ್ನಲಾಗಿದೆ.
ಬುಧವಾರ ತಡರಾತ್ರಿ ಕೃಷ್ಣೇಗೌಡರ ಮನೆಗೆ ನುಗ್ಗಿದ ನಾಲ್ವರು ಮನೆಯಲ್ಲಿ ಒಬ್ಬರೇ ಇದ್ದ ಕೃಷ್ಣೇಗೌಡರ ಕೈಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ, ಬೀರುವಿನದಲ್ಲಿದ್ದ ನಗದು, ಚಿನ್ನಾಭರಣ ದೋಚಿದರು ಎಂದು ಹೇಳಲಾಗಿದೆ.
ಈ ಸಂಬಂಧ ಕೃಷ್ಣೇಗೌಡ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆಬೀಸಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story