ಕೋಲಾರ: ಕತ್ತು ಕೊಯ್ದು ಯುವಕನ ಹತ್ಯೆ
ಕೋಲಾರ, ಡಿ.28: ಉತ್ತರ ಭಾರತ ಮೂಲದ ಯುವಕನೋರ್ವನನ್ನು ಕತ್ತು ಕೊಯ್ದು ಕೊಲೆಗೈದ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದ್ದು, ಪ್ರಕರಣ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ ಮೂಲದ ಸಾಜದ್(32) ಕೊಲೆಯಾದವರು.
ಸಾಜದ್ ಕಳೆದ ಐದು ವರ್ಷಗಳಿಂದ ಇಲ್ಲಿನ ಶಾಹಿಂ ಶಾ ನಗರದ ಬಿಲಾಲ್ ಮಸೀದಿ ಬಳಿ ಸಲೂನ್ ನಡೆಸುತ್ತಿದ್ದರು.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಆಗಮಿಸಿರುವ ಕೋಲಾರ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದೆ.
Next Story