ಪ್ರೊ.ಭಗವಾನ್ ಮನೆಗೆ ಮುತ್ತಿಗೆ ಯತ್ನ: ಯುವ ಮೋರ್ಚಾ ಕಾರ್ಯಕರ್ತರ ಬಂಧನ
ಮೈಸೂರು, ಡಿ.28: ವಿಚಾರವಾದಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಅರ್ಧದಲ್ಲಿಯೇ ತಡೆದು ಬಂಧಿಸಿದ ಘಟನೆ ನಗರದ ಕುವೆಂಪು ನಗರದಲ್ಲಿ ನಡೆಯಿತು.
ಪ್ರೊ.ಕೆ.ಎಸ್.ಭಗವಾನ್ ಅವರು ಶ್ರೀರಾಮನ ಬಗ್ಗೆ ಅವಹೇಳನಾಕಾರಿಯಾಗಿ ಬರೆದಿದ್ದಾರೆ. ಅವರು ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿಶಾಂತ್ ಶ್ರೀರಾಮನ ಫೋಟೊ ಹಿಡಿದು ಭಗವಾನ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಷಯ ತಿಳಿದ ಎಸಿಪಿ ಧರ್ಮಪ್ಪ, ಭಗವಾನ್ ಮನೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದರು. ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.
Next Story