ಸಚಿವ ರೇವಣ್ಣ ಹೇಳಿಕೆಗೆ ಆರ್.ವಿ.ದೇಶಪಾಂಡೆ ಆಕ್ಷೇಪ
ಬೆಂಗಳೂರು, ಡಿ. 29: ದಲಿತ ಮುಖಂಡ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೆ ತುಳಿಯುತ್ತಿದ್ದಾರೆಂಬ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಮಂದಿ ದಲಿತರನ್ನು ಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ದೇಶಪಾಂಡೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹೀಗಾಗಿ ರೇವಣ್ಣನವರ ಮಾತು ಸತ್ಯಕ್ಕೆ ದೂರವಾದುದು ಎಂದು ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.
Next Story