ಸಿದ್ದಗಂಗಾ ಶ್ರೀ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ ಪರಮೇಶ್ವರ್
ತುಮಕೂರು,ಜ.5: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರು ನಗರದಲ್ಲಿರುವ ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.
ಭೇಟಿಯ ನಂತರ ಮಾತನಾಡಿದ ಅವರು, ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಆದಷ್ಟು ಬೇಗ ಸ್ವಾಮೀಜಿಯವರು ಗುಣಮುಖರಾಗಬೇಕು ಎಂದು ಆಶಿಸುತ್ತೇನೆ. ವೈದ್ಯರು ಎಲ್ಲಾ ರೀತಿಯ ಚಿಕಿತ್ಸೆ ಹಾಗೂ ಪ್ರಯತ್ನಗಳನ್ನು ಮಾಡಿದ್ದು, ಶ್ರೀಗಳು ಆರೋಗ್ಯವಾಗಿದ್ದಾರೆ. ಯಾವುದೇ ಆತಂಕವಿಲ್ಲ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ದಿವ್ಯಾಗೋಪಿನಾಥ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮತ್ತಿತರರು ಹಾಜರಿದ್ದರು.
Next Story