Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾನು ಎಡಪಂಥೀಯನೂ ಹೌದು, ಬಲಪಂಥೀಯನೂ...

ನಾನು ಎಡಪಂಥೀಯನೂ ಹೌದು, ಬಲಪಂಥೀಯನೂ ಹೌದು: ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರ

84ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ6 Jan 2019 8:44 PM IST
share
ನಾನು ಎಡಪಂಥೀಯನೂ ಹೌದು, ಬಲಪಂಥೀಯನೂ ಹೌದು: ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರ

ಧಾರವಾಡ, (ಅಂಬಿಕಾತನಯದತ್ತ ವೇದಿಕೆ) ಜ.6: ನನಗೆ ಇಂದಿಗೂ ಎಡಪಂಥೀಯ, ಬಲಪಂಥೀಯದ ಬಗ್ಗೆ ಅರ್ಥವಾಗಿಲ್ಲ. ಹೀಗಾಗಿ ನನಗೆ ಎರಡು ಕೈಗಳಿರುವುದರಿಂದ ನಾನು ಎಡನೂ ಹೌದು, ಬಲನೂ ಹೌದೆಂದು 84ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರ ತಿಳಿಸಿದರು.

ರವಿವಾರ ನಗರದ ಕೃಷಿ ವಿವಿಯಲ್ಲಿ ಆವರಣದಲ್ಲಿ ಆಯೋಜಿಸಿದ್ದ 84ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಎಡ, ಬಲ ಏನೆಂಬುದನ್ನು ಇಲ್ಲಿಯವರೆಗೂ ನಾನು ಕಂಡಿಲ್ಲ. ಈ ಕುರಿತು ಪ್ರಶ್ನೆ ಕೇಳಿದ ಮೇಲೆ ಯೋಚಿಸುವಂತಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ನನ್ನ ಸಹಪಾಠಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ನಾನು ಎತ್ತಿ ಆಡಿಸಿದ ಮಗು. ಇವರಿಬ್ಬರ ಸಾವಿನಿಂದ ಅತಿಯಾದ ದುಃಖವಾಗಿದೆ. ಇದನ್ನು ಸಾರ್ವಜನಿಕವಾಗಿ ತೋರ್ಪಡಿಸುವ ಅಗತ್ಯವಿಲ್ಲ. ಈ ಪ್ರಕರಣಗಳ ಕುರಿತು ನಾನು ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ಅದನ್ನು ಇಲ್ಲಿ ಪ್ರಸ್ತಾಪಿಸುವ ಅಗತ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೂರ್ಣ ಕುಂಬಮೇಳ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಪೂರ್ಣ ಕುಂಭ ಮೆರವಣಿಗೆಯಲ್ಲಿ ಸ್ತ್ರೀಯರಿಗೆ ಅನ್ಯಾಯವಾಗಿದೆ ಎಂದು ನಾನು ಭಾವಿಸುವುದಿಲ್ಲ. ಈ ಬಗ್ಗೆ ಪರಿಷತ್ ಸರಿಯಾದ ಸಮಯದಲ್ಲಿ ಸರಿಯಾದ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ.

ಸ್ತ್ರೀ ಬದುಕು ಕಟ್ಟುವ ಕೆಲಸ ಮಾಡಿದರೆ, ಪುರುಷ ಅಹಂಕಾರ ಪ್ರದರ್ಶಿಸಿ ಎಲ್ಲವನ್ನೂ ಗೆಲ್ಲುವ ಪ್ರವೃತ್ತಿ ಹೊಂದಿದ್ದಾನೆ. ಸ್ತ್ರೀ ಹೆತ್ತು ಹೊತ್ತು ಸಾಕಿ ಸಲಹಿದರೆ, ಗಂಡ ಯುದ್ಧ ಮಾಡಿ ಆಳುವ, ಅಧಿಪತ್ಯ ಸ್ಥಾಪಿಸುವ ಮನಸ್ಥಿತಿ ಹೊಂದಿದ್ದಾನೆ. ಸ್ತ್ರೀ ಮರದಂತೆ ಬೀಜ ಬಿತ್ತಿ ಸಮಾಜವನ್ನು ಬೆಳೆಸುತ್ತಾಳೆ. ಇಂತಹ ಸ್ತ್ರೀಯರಿಗೆ ಅನ್ಯಾಯವಾದರೆ ನಾನು ಸುಮ್ಮನಿರುವುದಿಲ್ಲ. ಆದರೆ ಕುಂಭ ಮೆರವಣಿಗೆಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ ಎಂದು ಹೇಳಿದರು.

ವಿದ್ಯೆಯನ್ನು ಸೃಷ್ಟಿಸುವುದನ್ನು ಕಲಿಯಬೇಕು. ಈ ಚಿಂತನೆಯಿಂದಲೇ ಕನ್ನಡ ವಿಶ್ವವಿದ್ಯಾಲಯವನ್ನು ಕಟ್ಟಲು ಸಾಧ್ಯವಾಯಿತು. ಇದಕ್ಕೆ ಆಗಿನ ಸರಕಾರದ ಸಂಪೂರ್ಣ ಬೆಂಬಲ ಇದ್ದುದು ಕೂಡ ನಮ್ಮ ಸುದೈವ. ಮುಂದಿನ ತಲೆಮಾರು ಪಾಶ್ಚಾತ್ಯದಿಂದ ಕಲಿಯುವುದಕ್ಕಿಂತ ಈ ನೆಲದೊಳಗೆ ಈಗಾಗಲೇ ಹಾಸುಹೊಕ್ಕಾಗಿರುವ ವಿದ್ಯೆಯನ್ನು ಪುನರ್ ಸೃಷ್ಟಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಇಂಗ್ಲಿಷ್ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಎಲ್ಲಾ ಸಲಕರಣೆಗಳನ್ನು ಕನ್ನಡ ಭಾಷೆ ಪ್ರಚಾರಕ್ಕೂ ಬಳಸಿಕೊಳ್ಳಬೇಕು. ಈ ಬಗ್ಗೆ ನಾನು ಮತ್ತು ಪೂರ್ಣಚಂದ್ರ ತೇಜಸ್ವಿ ಹಲವು ಕೆಲಸಗಳನ್ನು ಮಾಡಿದ್ದು, ಹಲವು ರಾಜಕಾರಣಿಗಳನ್ನು ಭೇಟಿಯಾಗಿದ್ದೇವೆ. ಆದರೆ ಬಿ.ಎಸ್,ಯಡಿಯೂರಪ್ಪ ಹೊರತುಪಡಿಸಿ ತಮಗೆ ಯಾರೂ ಬೆಂಬಲ ನೀಡಲಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X