ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶಾಸಕ ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಜ. 7: ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರವಿವಾರ ನಡೆದಿದೆ.
ಮರಳು ಸಾಗಿಸಲು ಪರ್ಮಿಟ್ ಪಡೆದರೂ ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹೊಸದುರ್ಗ ಪೊಲೀಸ್ ಠಾಣೆ ಎದುರು ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದಾಗ ಅವರ ಬೆಂಬಲಿಗರು ಅದನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.
ಗೂಳಿಹಟ್ಟಿ ಶೇಖರ್ ಅವರ ಕಿವಿ, ಮೂಗು, ಬಾಯೊಳಗೆ ಪೆಟ್ರೋಲ್ ಹೋಗಿದೆ ಎಂದು ಹೇಳಲಾಗಿದ್ದು, ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
Next Story