ಹಣದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಮೈಸೂರು,ಜ.7: ಹಣದ ವಿಚಾರದಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೈಸೂರು ತಾಲೂಕು ಎಂ.ಸಿ.ಹುಂಡಿಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಪ್ರಶಾಂತ್ (36) ಎಂದು ಗುರುತಿಸಲಾಗಿದೆ. ಪ್ರಶಾಂತ್ ನ ತೋಟದ ಮನೆಗೆ ನುಗ್ಗಿ ಮಚ್ಚಿನಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಲೋಕೇಶ್ ಹಾಗೂ ಪ್ರಮೋದ್ ಎಂಬವರು ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ವರುಣಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story