ಬೈಕ್ಗಳ ನಡುವೆ ಅಪಘಾತ: ಓರ್ವ ಸಾವು
ಶಿವಮೊಗ್ಗ, ಜ. 10: ಎರಡು ಬೈಕ್ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟು, ಮತ್ತೋರ್ವರು ಗಾಯಗೊಂಡ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಡ ಗ್ರಾಮದ ಪಶು ಆಹಾರ ಕಾರ್ಖಾನೆ ಸಮೀಪ ಬುಧವಾರ ನಡೆದಿದೆ.
ಕಪ್ಪನಹಳ್ಳಿ ಗ್ರಾಮದ ನಿವಾಸಿ ಹಾಗೂ ಪಶು ಕೈಗಾರಿಕಾ ಘಟಕದಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ (35) ಮೃತಪಟ್ಟವರೆಂದು ಗುರುತಿಸಲಾಗಿದೆ. ವಿಶ್ವನಾಥ ಗಾಯಗೊಂಡವರೆಂದು ಗುರುತಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story