ಹನೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಚಾಲನೆ
ಹನೂರು,ಜ.12: ಕಾಮಗಾರಿ ಜವಾಬ್ದಾರಿ ಹೊತ್ತವರು ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಮೂಲಕ ನಿರ್ವಹಣೆ ಮಾಡಬೇಕು. ಒಂದು ವೇಳೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಆರ್ ನರೇಂದ್ರ ರಾಜುಗೌಡ ಎಚ್ಚರಿಸಿದರು.
ಕ್ಷೇತ್ರ ವ್ಯಾಪ್ತಿಯ ಚಿಂಚಳ್ಳಿ-ಅಲಗುಮೂಲೆಯ ಮೂಲಕ ಬಂಡಳ್ಳಿ ಮುಖ್ಯ ರಸ್ತೆಗೆ ಸೇರುವ ರಸ್ತೆ ಹಾಗೂ ರಾಮಾಪುರ-ನಾಲ್ರೋಡ್ಗೆ ತೆರಳುವ ರಸ್ತೆಯ ಡಾಂಬರೀಕರಣಕ್ಕೆ ಅಂದಾಜು 2.14 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕಳೆದ ಬಾರಿಯ ಸಿದ್ದರಾಮಯ್ಯ ಸರ್ಕಾರದಲ್ಲಿ ಹನೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆಯಾಗಿತ್ತು. ಈ ದಿಸೆಯಲ್ಲಿ ಪ.ಜಾತಿ, ಪ.ಪಂಗಡದ ಕಾಲೋನಿಗಳಲ್ಲಿ ಶೇ.90 ರಷ್ಟು ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸುವುದರ ಜತೆಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲಾಗಿದೆ. ಅಲ್ಲದೇ ಲೋಕೋಪಯೋಗಿ ಇಲಾಖೆಯಿಂದ ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿರಲಿಲ್ಲ. ಇದೀಗ 1.14 ಕೋಟಿ ರೂ ವೆಚ್ಚದಲ್ಲಿ ನಬಾರ್ಡ್ ಯೋಜನೆಯಡಿ ಚಿಂಚಳ್ಳಿ-ಅಲಗುಮೂಲೆ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ 1 ಕೋಟಿ ರೂ ವೆಚ್ಚದಲ್ಲಿ ರಾಮಾಪುರ-ನಾಲ್ರೋಡ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಜವಾಬ್ದಾರಿ ಹೊತ್ತವರು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಮೂಲಕ 5 ವರ್ಷದ ತನಕ ನಿರ್ವಹಣೆ ಮಾಡಬೇಕು. ಒಂದು ವೇಳೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಬಸವರಾಜು, ಡಿ.ಲೇಖಾ, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯರಾದ ಜವಾದ್ ಆಹಮದ್, ನಟರಾಜು, ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ, ಮುಖಂಡರಾದ ಬಸವರಾಜು, ಕೃಷ್ಣಕುಮಾರ್,ನಾಗರಾಜು ಹಾಗೂ ಅಧಿಕಾರಿಗಳಾದ ಮಹದೇವಸ್ವಾಮಿ, ಸತೀಶ್ ಚಿನ್ನಣ್ಣ ಹಾಗೂ ಗುತ್ತಿಗೆದಾರ ಮಹದೇವ್ ಆಶೋಕ್ ಸೇರಿದಂತೆ ಹಲವುರು ಹಾಜರಿದ್ದರು.