ಮಡಿಕೇರಿಯಲ್ಲಿ ಗುಂಪುಗಳ ನಡುವೆ ಮಾರಾಮಾರಿ: ಓರ್ವನ ಸ್ಥಿತಿ ಗಂಭೀರ
ಹಳೇ ದ್ವೇಷ ಹಿನ್ನೆಲೆ
ಮಡಿಕೇರಿ, ಜ.13: ಹಳೇ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿಯ ಭಗವತಿ ನಗರ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ತೀವ್ರವಾಗಿ ಗಾಯಗೊಂಡಿರುವ ಚಂದನ್ ಎಂಬಾತನನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಾಶಿ ಕಾವೇರಪ್ಪ ಹಾಗೂ ಚಂದನ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ಅಚ್ಚಯ್ಯ, ಅಯ್ಯಪ್ಪ, ನಿಖಿಲ್ ಎಂವವರು ತಲೆ ಮರೆಸಿಕೊಂಡಿದ್ದು, ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story