ಬರಪೀಡಿತ ಜಿಲ್ಲೆಗಳಲ್ಲಿ ಜ.19ರಿಂದ ಸಂಪುಟ ಉಪ ಸಮಿತಿ ಪ್ರವಾಸ
ಬೆಂಗಳೂರು, ಜ. 17: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದ ಸಂಪುಟ ಉಪಸಮಿತಿಯು ಜ.19ರಿಂದ 22ರ ವರೆಗೆ ಬರಪೀಡಿತ ಜಿಲ್ಲೆಗಳಾದ ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.
ಜ.19ರಂದು ಧಾರವಾಡ ಜಿಲ್ಲೆಯಲ್ಲಿನ ಬರ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರುವ ಉಪಸಮಿತಿಯ ಸದಸ್ಯರು, ನಂತರ ಬರ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ಕುರಿತು ಹುಬ್ಬಳ್ಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.
ಜ.21ರಂದು ಉತ್ತರ ಕನ್ನಡ ಮತ್ತು 22ರಂದು ಬೆಳಗಾವಿ ಜಿಲ್ಲೆಗಳಲ್ಲಿ ಉಪಸಮಿತಿಯು ಪ್ರವಾಸ ಮಾಡಿ, ಇದೇ ರೀತಿಯ ಸಭೆಗಳನ್ನು ನಡೆಸಲಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story