ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಜ.19: ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ಮಧ್ಯಾಹ್ನ 3:00 ಗಂಟೆಗೆ ಈಗಲ್ಟನ್ ರೆಸಾರ್ಟ್ ನಲ್ಲಿ ನಡೆಯಲಿದೆ.
ಇದಕ್ಕೂ ಮೊದಲು ಮಧ್ಯಾಹ್ನ 12:00 ಗಂಟೆಗೆ ಕಾಂಗ್ರೆಸ್ ಶಾಸಕರಿಗೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭೋಜನ ಕೂಟವನ್ನು ಏರ್ಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಚ್ಚೆರಿಕೆಯ ಕ್ರಮವಾಗಿ ಕೈಗೊಳ್ಳಬೇಕಾದ ವಿಚಾರದ ಬಗ್ಗೆ ಕಾಂಗ್ರೆಸ್ ನ ನಾಯಕರು ಚರ್ಚೆ ನಡೆಸಲಿದ್ದಾರೆ ತಿಳಿದು ಬಂದಿದೆ
ಕೆಸಿವಿ –ನಾಗೇಂದ್ರ ಮಾತುಕತೆ: ಅತೃಪ್ತ ಶಾಸಕ ಬಿ. ನಾಗೇಂದ್ರ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ.
ಶುಕ್ರವಾರ ನಡೆದ ಸಿಎಲ್ ಪಿ ಸಭೆಗೆ ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ನಾಗೇಂದ್ರ ಅವರು ಕೆಸಿವಿಗೆ ತಿಳಿಸಿದ್ದಾರೆ. ಕೂಡಲೇ ಕಾಂಗ್ರೆಸ್ ಶಾಸಕರ ಜೊತೆ ಸೇರುವಂತೆ ಕೆ.ಸಿ.ವೇಣುಗೋಪಾಲ್ ಸಲಹೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story