ಹನೂರು: ಜೆಎಸ್ಎಸ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಹನೂರು, ಜ. 19 : ಸರ್ಕಾರ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವುದರ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಬೇಕೆಂದು ತಾಲ್ಲೂಕು ಪಂಚಾಯತ್ ಸದಸ್ಯ ಜವಾದ್ ಅಹಮದ್ ತಿಳಿಸಿದರು.
ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೈಕಲ್ ವಿತರಣೆ ಮಾಡಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ನೀಡುವ ದಿಸೆಯಲ್ಲಿ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರಲ್ಲಿ ಉಚಿತ ಸೈಕಲ್ ವಿತರಣೆ ಮಹತ್ತರವಾದ ಯೋಜನೆಯಾಗಿದೆ. ಈ ಸೈಕಲ್ ವಿತರಣೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಇದೇ ಸಂದರ್ಭ ಗ್ರಾಪಂ ಅಧ್ಯಕ್ಷ ರಾಚ್ಚಪ್ಪ, ಸದಸ್ಯ ಅಬ್ರಾಯಮ್, ಶಾಲಾ ಮುಖ್ಯ ಶಿಕ್ಷಕ ದೂರೈಸ್ವಾಮಿ ಸೇರಿದಂತೆ ಪೋಷಕರು ಹಾಜರಿದ್ದರು.
Next Story