ಆನಂದ್ ಸಿಂಗ್ ಮೇಲೆ ಹಲ್ಲೆ ನಡೆದಿಲ್ಲ : ಹೆಚ್.ಎಂ.ರೇವಣ್ಣ
ಬೆಂಗಳೂರು, ಜ.20: ಈಗಲ್ಟನ್ ರೆಸಾರ್ಟ್ ನಲ್ಲಿ ಗಲಾಟೆ ನಡೆದಿಲ್ಲ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆದಿಲ್ಲ. ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ನಾನು ಆನಂದ್ ಸಿಂಗ್ ಜೊತೆ ಇದ್ದೆ. ಅವರ ಮೇಲೆ ಹಲ್ಲೆ ನಡೆದಿದೆ ಎನ್ನುವುದು ಸುಳ್ಳು ಎಂದು ರೇವಣ್ಣ ಹೇಳಿದ್ದಾರೆ.
ಆನಂದ್ ಸಿಂಗ್ ಅವರಿಗೆ ಗಾಯವಾಗಿಲ್ಲ. ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವುನಿಂದ ಬಿದ್ದಾಗ ಅವರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಈ ಕಾರಣದಿಂದಾಗಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆನಂದ್ ಸಿಂಗ್ ಸಂಬಂಧಿ ಸಂತೋಷ್ ಸಿಂಗ್ ಮಾಹಿತಿ ನೀಡಿದ್ದಾರೆ.
ಆನಂದ ಸಿಂಗ್ ಅರಾಮವಾಗಿದ್ದಾರೆ. ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
Next Story