ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
ದಾವಣಗೆರೆ, ಜ.24: ಕೃಷಿಗೆ ಸಾಲ ಮಾಡಿದ್ದ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಎಕ್ಕೆಗೊಂದಿ ಗ್ರಾಮದಲ್ಲಿಂದು ನಡೆದಿದೆ.
ಹರಿಹರ ತಾಲೂಕಿನ ಎಕ್ಕೆಗೊಂದಿ ಗ್ರಾಮದ ಹೊನ್ನಪ್ಪ (40) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಸಹಕಾರಿ ಬ್ಯಾಂಕು ಮತ್ತು ಕೈಗಡ ಸಾಲ ಮಾಡಿದ್ದರೆನ್ನಲಾಗಿದೆ.
ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಎಸ್ ಬಿ ಐ ಬ್ಯಾಂಕಿನಲ್ಲಿ ಬೆಳೆಸಾಲ ಹಾಗೂ ಟ್ರಾಕ್ಟರ್ ಸಾಲ ಸೇರಿ ಒಟ್ಟು 12 ಲಕ್ಷ ರೂ., ಸಹಕಾರಿ ಸಂಘದಲ್ಲಿ 50 ಸಾವಿರ ರೂ. ಹಾಗೂ ಕೈಗಡವಾಗಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರೆನ್ನಲಾಗಿದೆ. ಇದನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story