ಸಾಲುಮರದ ತಿಮ್ಮಕ್ಕ ಸೇರಿ ರಾಜ್ಯದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ
ಬೆಂಗಳೂರು, ಜ.25: ಸಾಲುಮರದ ತಿಮ್ಮಕ್ಕ ಸೇರಿದಂತೆ ಕರ್ನಾಟಕದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
70ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ 2019ನೇ ಸಾಲಿನ ಪದ್ಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆ ಶುಕ್ರವಾರ ರಾತ್ರಿ 2019ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕದ ಸಾಧಕರು: ಪ್ರಭುದೇವ (ಸಂಗೀತ,ನೃತ್ಯ), ರೋಹಿಣಿ ಗೋಡುಬಳೆ (ವಿಜ್ಞಾನ, ಇಂಜಿನಿಯರಿಂಗ್), ಶಾರದಾ ಶ್ರೀನಿವಾಸನ್ (ಪುರಾತತ್ವ), ರಾಜೀವ್ ತಾರಾನಾಥ್ (ಸಂಗೀತ, ಕಲೆ), ಸಾಲುಮರದ ತಿಮ್ಮಕ್ಕ (ಸಮಾಜ ಸೇವೆ)
Next Story