ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಡಾ.ಜಿ.ಪರಮೇಶ್ವರ್ ನೇತೃತ್ವದ ಕೆಪಿಸಿಸಿ ತನಿಖಾ ತಂಡ
ಬೆಂಗಳೂರು, ಜ. 27: ಹಲ್ಲೆಗೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರನ್ನು ಕೆಪಿಸಿಸಿ ವತಿಯಿಂದ ರಚಿಸಲಾಗಿರುವ ತನಿಖಾ ತಂಡದ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನೇತೃತ್ವದ ಸಮಿತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಮಧ್ಯೆ ಜ.19ರ ರಾತ್ರಿ ಹೊಡೆದಾಟ ನಡೆದಿತ್ತು. ಇದರಿಂದ ಆನಂದ್ ಸಿಂಗ್ ಬಲಗಣ್ಣಿನ ಗಂಭೀರ ಸ್ವರೂಪದ ಗಾಯಗಳಾಗಿದ್ದವು.
ರವಿವಾರ ಸಂಜೆ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಡಾ.ಜಿ.ಪರಮೇಶ್ವರ್ ಹಾಗೂ ಸಮಿತಿ ಸದಸ್ಯರೂ ಆಗಿರುವ ಸಚಿವ ಕೃಷ್ಣಬೈರೇಗೌಡ, ಆನಂದ್ ಸಿಂಗ್ ಅವರಿಂದ ಮಾಹಿತಿ ಪಡೆಯಿತು ಎಂದು ಗೊತ್ತಾಗಿದೆ.
Next Story