ಸಿದ್ದರಾಮಯ್ಯರನ್ನು ಹೊಗಳಿದರೆ ತಪ್ಪೇನು: ಡಿಸಿಎಂ ಪರಮೇಶ್ವರ್
ಬೆಂಗಳೂರು, ಜ. 28: ಕಾಂಗ್ರೆಸ್ ಪಕ್ಷದ ಶಾಸಕರು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯನವರನ್ನು ಹೊಗಳಿದ್ದರಲ್ಲಿ ತಪ್ಪೇನಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು. ಐದು ವರ್ಷ ಅವರು ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆ ಕಾರಣಕ್ಕೆ ಅವರನ್ನು ಹೊಗಳಿರಬಹುದು ಎಂದರು.
‘ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ಅಭಿವೃದ್ಧಿಯಾಗಿಲ್ಲ’ ಎಂಬ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಅವರಿಗೆ ಸರಿಯಾಗಿ ಮಾಹಿತಿ ಇಲ್ಲ. ಮೈತ್ರಿ ಸರಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.
Next Story