ಕಡೂರು: ಲಾರಿ ಮರಕ್ಕೆ ಢಿಕ್ಕಿ; ಸ್ಥಳದಲ್ಲೇ ಚಾಲಕ ಮೃತ್ಯು
ಚಿಕ್ಕಮಗಳೂರು, ಜ. 30: ನಿಯಂತ್ರಣ ತಪ್ಪಿದ ಲಾರಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಮಗಳೂರಿನಿಂದ ಅರಸೀಕೆರೆಗೆ ಗೊಬ್ಬರ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಬಾಣೂರು ಬಳಿ ಮರಕ್ಕೆ ಢಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಅರಿತ ಸಖರಾಯಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story