ಬಿಡಿಎ ಚೇರ್ಮನ್ ಬೀದಿಯಲ್ಲಿ ನಿಂತು ಸಿಎಂ ಬಗ್ಗೆ ಮಾತನಾಡಿದರೆ ಸುಮ್ಮನಿರಲು ಆಗುತ್ತಾ?: ಸಚಿವ ಪುಟ್ಟರಾಜು
ಮಂಡ್ಯ,ಜ.31: ಸಮ್ಮಿಶ್ರ ಸರ್ಕಾರ 5 ವರ್ಷ ಸುಲಲಿತವಾಗಿ ನಡೆಯಬೇಕಾದರೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಪಕ್ಷದ ರಾಜ್ಯ ನಾಯಕರಿಗೆ ಸೂಚನೆ ನೀಡಬೇಕು ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಸಿದರು.
ಮೇಲುಕೋಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿ ಕೆಲಸ ಮಾಡಲು ಸೂಚನೆ ನೀಡಬೇಕು. ಬಿಡಿಎ ಚೇರ್ಮನ್ ಆಗಿರುವವನು ಬೀದಿಯಲ್ಲಿ ನಿಂತು ಮುಖ್ಯಮಂತ್ರಿ ಬಗ್ಗೆ ಮಾತನಾಡಿದರೆ ಸುಮ್ಮನಿರಲು ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರನ್ನು ಸೆಳೆಯಲು ಮಾಜಿ ಸಚಿವ ಯೋಗೇಶ್ವರ್ ಯತ್ನಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅವನು ಈಗಿನಿಂದ ಅಲ್ಲ. ಕಳೆದ ಏಳೆಂಟು ತಿಂಗಳಿನಿಂದ ಪ್ರಯತ್ನಿಸುತ್ತಿದ್ದಾನೆ. ಸಾಧ್ಯವಾಗಿಲ್ಲ ಅಷ್ಟೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
Next Story