ಉಪಹಾರ ಸೇವಿಸಿ ಅಸ್ವಸ್ಥರಾದ ಸಚಿವ ಶಿವಳ್ಳಿ ಆಸ್ಪತ್ರೆಗೆ ದಾಖಲು
ವಿಷ ಬೆರೆಸಿರುವ ಶಂಕೆ ?
ಹುಬ್ಬಳ್ಳಿ, ಫೆ.04: ಕಾರ್ಯಕ್ರಮವೊಂದರಲ್ಲಿ ಉಪಹಾರ ಸೇವಿಸಿದ್ದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಹೇಳಲಾಗುತ್ತಿದೆ.
ನಿನ್ನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಸಚಿವರು ವಾಪಸ್ ಬರುವಾಗ ಮಾರ್ಗಮಧ್ಯೆ ವಾಂತಿ ಮಾಡಿಕೊಂಡಿದ್ದಾರೆ. ಇದರಿಂದ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಉಪ್ಪಿಟ್ಟು ಸೇವಿಸಿದ್ದರಿಂದಲೇ ವಾಂತಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಅಲ್ಲದೇ, ಸಚಿವರ ಗನ್ ಮ್ಯಾನ್, ಆಪ್ತ ಕಾರ್ಯದರ್ಶಿ ಸೇರಿದಂತೆ ನಾಲ್ಕು ಜನರಿಗೆ ವಾಂತಿಯಾಗಿದ್ದು, ಉಪ್ಪಿಟ್ಟಿನಲ್ಲಿ ವಿಷ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಆದರೆ ಈ ಬಗ್ಗೆ ಯಾವುದೇ ವಿಚಾರವನ್ನು ಆಸ್ಪತ್ರೆಯ ವ್ಯೆದ್ಯರು ಸ್ಪಷ್ಟಪಡಿಸಿಲ್ಲ
Next Story