ಪತ್ರಿಕಾ ವರದಿ ಫಲಶೃತಿ: ಪಟ್ಟಣ ಪಂಚಾಯತ್ ನಿಂದ ಬೋರ್ ವೆಲ್ ದುರಸ್ತಿ
ಹನೂರು,ಫೆ.12: ಪಟ್ಟಣದ ಬೆಟ್ಟಳ್ಳಿ ಮಾರಮ್ಮನ ಸನ್ನಿಧಿಯ ಮುಂಭಾಗವಿರುವ ಬೋರ್ ವೆಲ್ ರಿಪೇರಿಯಾಗದಿರುವ ಸಂಬಂಧ ಫೆ.10 ಸೋಮವಾರದಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಪಟ್ಟಣ ಪಂಚಾಯತ್ ಅಧಿಕಾರಿಗಳು ಸೋಮವಾರವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಅಲ್ಲದೇ, ಇಂದು ಬೋರ್ವೇಲ್ ಅನ್ನು ಸರಿಪಡಿಸಿ ಸಾರ್ವಜನಿಕರಿಗೆ ಮತ್ತು ಭಕ್ತಾಧಿಗಳಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಅನುವು ಮಾಡಿಕೊಟ್ಟಿದ್ದಾರೆ. ಈ ಸಮಸ್ಯೆಗೆ ಸಕಾಲಕ್ಕೆ ಸ್ಪಂದಿಸಿದ ಪಪಂ ಮುಖ್ಯಾಧಿಕಾರಿ ಎಸ್.ಡಿ ಮೋಹನ್ ಕೃಷ್ಣ ಹಾಗೂ ಆರೋಗ್ಯಾಧಿಕಾರಿ ರಾಘವೇಂದ್ರ ಮತ್ತು ಸಿಬ್ಬಂದಿಗಳನ್ನು ಸಾರ್ವಜನಿಕರು ಅಭಿನಂದಿಸಿದ್ದಾರೆ.
Next Story