ವಿಜಯಪುರದಲ್ಲಿ ಹುತಾತ್ಮ ಯೋಧರಿಗೆ ಪತ್ರಕರ್ತರಿಂದ ನಮನ
ವಿಜಯಪುರ,ಫೆ.15: ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ವಿಜಯಪುರದಲ್ಲಿ ಕಾರ್ಯನಿರತ ಪರ್ತಕರ್ತರ ಸಂಘದಿಂದ ಭಾವಪೂರ್ಣ ನಮನ ಸಲ್ಲಿಸಲಾಯಿತು.
ನಗರದ ಮೀನಾಕ್ಷಿ ವೃತ್ತದಲ್ಲಿ ಜಮಾವಣೆಗೊಂಡು ಕೈಗೆ ಕಪ್ಪುಬಟ್ಟಿ ಕಟ್ಟಿಕೊಂಡು ಕ್ಯಾಂಡಲ್ ಹಚ್ಚಿ ಯೋಧರಿಗೆ ನಮನ ಸಲ್ಲಿಸಿದರು.
ಶ್ರದ್ಧಾಂಜಲಿ ವೇಳೆ ಪತ್ರಕರ್ತರು ಉಗ್ರರ ಕೃತ್ಯವನ್ನು ಖಂಡಿಸಿದರು. ಯೋಧರನ್ನು ಬಲಿ ಪಡೆದ ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಹಿರಿಯ, ಕಿರಿಯ ಪತ್ರಕರ್ತರು ಹಾಗೂ ನೂರಾರು ಜನ ಸಾರ್ವಜನಿಕರು ಭಾಗಿಯಾಗಿ ಹುತಾತ್ಮ ಯೋಧರಿಗೆ ಕಂಬನಿ ಮಿಡಿದು ನಮನ ಸಲ್ಲಿಸಿದರು.
Next Story