ಕಾಂಗ್ರೆಸ್ನಲ್ಲಿ ಭಿನ್ನಮತ ಇಲ್ಲ: ಸತೀಶ್ ಜಾರಕಿಹೊಳಿ
ಧಾರವಾಡ, ಫೆ.17: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಸಿದ್ದರಾಮಯ್ಯ ಹಾಗೂ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ಹೀಗಾಗಿ ಸದ್ಯ ಕಾಂಗ್ರೆಸ್ನಲ್ಲಿ ಯಾವುದೆ ಭಿನ್ನಮತ ಇಲ್ಲವೆಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ನಾನು ರಮೇಶ್ ಜಾರಕಿಹೊಳಿಯವರಿಂದ ಸಚಿವ ಸ್ಥಾನ ಪಡೆದಿಲ್ಲ. ಕಾಂಗ್ರೆಸ್ ಪಕ್ಷವೇ ನನಗೆ ಕೊಟ್ಟಿದೆ. ಅತೃಪ್ತ ಶಾಸಕರೆಂದು ಭಾವಿಸಲಾಗಿದ್ದ ಎಲ್ಲ ಶಾಸಕರು ನಮ್ಮೊಂದಿಗೆ ಇದ್ದಾರೆ. ಸದ್ಯ ಸಮಿಶ್ರ ಸರಕಾರಕ್ಕೆ ಯಾವುದೆ ಸಮಸ್ಯೆಯಿಲ್ಲವೆಂದು ತಿಳಿಸಿದರು.
ಇಡೀ ದೇಶವೇ ಉಗ್ರರ ದಾಳಿಗೆ ಆಕ್ರೋಶಗೊಂಡಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಧಾನಿ ನರೇಂದ್ರ ಮೋದಿ ಮೇಲಿದ್ದು, ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಬೆಳಗಾವಿ ಶಿಕ್ಷಕಿ ದೇಶದ್ರೋಹದ ಸ್ಟೇಟಸ್ ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮುಂದಿನ ಕ್ರಮ ಪೊಲೀಸರೇ ಕೈಗೊಳ್ಳುತ್ತಾರೆ ಎಂದರು.
Next Story