ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತೇ?: ಸಚಿವ ಯು.ಟಿ.ಖಾದರ್
ಬೆಂಗಳೂರು, ಫೆ. 18: ‘ಜವಾಬ್ದಾರಿ ಸ್ಥಾನದಲ್ಲಿ ಇರುವವರು ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತೇ’ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿರೋಧಿಗಳ ಜೊತೆ ಸ್ನೇಹ ಬಯಸಬೇಕಿತ್ತಾ? ವಿರೋಧಿಗಳು ಎಂಬುದು ಗೊತ್ತಿದ್ದರೂ ಅಲ್ಲಿಗೆ ಹೋಗಿದ್ದು ಸರಿಯಲ್ಲ. ಅಲ್ಲಿಂದ ಇಲ್ಲಿಗೆ ಬಂದು ಸೀರೆ ಕೊಡುವುದು ಬೇಕಿರಲಿಲ್ಲ ಎಂದು ಟೀಕಿಸಿದರು.
ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ದೇಶದ ಅಖಂಡತೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರಕಾರಕ್ಕೆ ಸಂಪೂರ್ಣ ಬೆಂಬಲ ಇದೆ. ಉಗ್ರರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಖಾದರ್ ಆಗ್ರಹಿಸಿದರು.
Next Story