ಸೇತುವೆ ಕುಸಿದು ನದಿಗೆ ಉರುಳಿದ ಕಾರು: ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಬೆಳಗಾವಿ,ಫೆ.22: ಸೇತುವೆ ಕುಸಿದ ಪರಿಣಾಮ ಕಾರೊಂದು ನದಿಗೆ ಬಿದ್ದ ಘಟನೆ ಬೈಲಹೊಂಗಲ ತಾಲೂಕಿನ ಬೆವಿನಕೊಪ್ಪ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಮಲಪ್ರಭಾ ನದಿಗೆ ಕಟ್ಟಿದ್ದ ಸೇತುವೆ ಕುಸಿದ ಪರಿಣಾಮ ಇಬ್ಬರು ಪ್ರಯಾಣಿಕರಿದ್ದ ಇಂಡಿಕಾ ಕಾರು ನದಿಗೆ ಉರುಳಿ ಬಿದ್ದಿದೆ. ಆದರೆ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
ನದಿಗೆ ಬಿದ್ದಿದ್ದ ಕಾರಿನಿಂದ ಕಿರುಚಾಟ ಕೇಳಿ ಬಂದಿದ್ದರಿಂದ ಎಚ್ಚೆತ್ತ ಸ್ಥಳೀಯರು ಕೂಡಲೇ ಹಗ್ಗದ ಸಹಾಯದಿಂದ ಅವರನ್ನು ರಕ್ಷಿಸಿದ್ದಾರೆ. ಅಲ್ಲದೇ, ಕಾರನ್ನು ಹಗ್ಗದಿಂದ ಎಳೆದು ನದಿಯಿಂದ ಹೊರಕ್ಕೆ ತೆಗೆದಿದ್ದಾರೆ ಎನ್ನಲಾಗಿದೆ.
ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
Next Story