ಜೀವನದಲ್ಲಿ ಜಿಗುಪ್ಸೆ: ವ್ಯಕ್ತಿ ನೇಣಿಗೆ ಶರಣು
ಹನೂರು,ಮಾ.5: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣಿಗೆ ಶರಣಾದ ಘಟನೆ ಹನೂರು ತಾಲೂಕಿನ ಕೊತ್ತಗುಳಿ ಗ್ರಾಮದಲ್ಲಿ ನಡೆದಿದೆ.
ರವಿನಾಯ್ಕ (38) ನೇಣಿಗೆ ಶರಣಾದ ವ್ಯಕ್ತಿ. ಕೂಲಿ ಕೆಲಸಗಾರರಾಗಿದ್ದ ರವಿನಾಯ್ಕ ಜೀವನದಲ್ಲಿ ಜಿಗುಪ್ಸೆಗೊಂಡು ಅರಣ್ಯದಲ್ಲಿ ತೆರಳಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಹನೂರು ತಾಲೂಕಿನ ರಾಮಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story