ಮುಂಡಗೋಡ: ರಸ್ತೆ ಅಪಘಾತಕ್ಕೆ ಯುವಕ ಬಲಿ
ಮುಂಡಗೋಡ, ಮಾ.7: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ತಾಲೂಕಿನ ಮುಂಡಗೋಡ-ಯಲ್ಲಾಪುರ ರಸ್ತೆಯ ಟಿಬೆಟ್ ಕ್ಯಾಂಪ್ 1ರ ಹತ್ತಿರ ಬುಧವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಗುಂಜಾವತಿ ಪಂಚಾಯತ್ ವ್ಯಾಪ್ತಿಯ ಬೆಂಡಿಗಟ್ಟಾ ಗ್ರಾಮದ ಜಾನು ಬಾಬು ಗಾವಡೆ(26) ಎಂದು ಗುರುತಿಸಲಾಗಿದೆ.
ಕಾರು ಮತ್ತು ಬೈಕ್ ಒಂದೇ ದಿಕ್ಕಿನಲ್ಲಿ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story