ಧಾರವಾಡ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಖುಷಿಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ
ಲೋಕಸಭೆ ಚುನಾವಣೆ
ಬೆಂಗಳೂರು, ಮಾ.13: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ನನ್ನನ್ನು ಒಳಗೊಂಡಂತೆ ಆರು-ಏಳು ಮಂದಿ ಆಕಾಂಕ್ಷಿಗಳಿದ್ದಾರೆ. ಇದರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಟ್ಟಾಗಿ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡಲಿದ್ದೇವೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರು ಶೀಘ್ರವಾಗಿ ಟಿಕೆಟ್ ಹಂಚಿಕೆ ಮಾಡಿದರೆ ಪ್ರಚಾರ ಮಾಡಲು ಅನುಕೂಲವಾಗುತ್ತದೆ. ನನಗೆ ಟಿಕೆಟ್ ಕೊಡಿ ಎಂದು ನಾನು ಒತ್ತಾಯಿಸುವುದಿಲ್ಲ. ಯಾರಿಗೆ ಕೊಟ್ಟರು ಖುಷಿಯೆ ಎಂದು ತಿಳಿಸಿದರು.
ಈ ಬಾರಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿಯ ಪ್ರಹ್ಲಾದ್ ಜೋಶಿ ಕಾರ್ಯವೈಖರಿಯ ಬಗ್ಗೆ ಜನತೆಗೆ ಬೇಸರವಿದೆ. ಇದನ್ನು ಸದುಪಯೋಗಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಕ್ಷೇತ್ರದ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡಲು ಸಿದ್ದರಿದ್ದಾರೆ. ಶೀಘ್ರವಾಗಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.
Next Story