Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಣವೇ ಸರ್ವಸ್ವ ಎಂಬ ಮನೋಭಾವ ತೊಲಗಲಿ:...

ಹಣವೇ ಸರ್ವಸ್ವ ಎಂಬ ಮನೋಭಾವ ತೊಲಗಲಿ: ವಿಮರ್ಶಕ ಟಿ.ಪಿ.ಅಶೋಕ್

ವಾರ್ತಾಭಾರತಿವಾರ್ತಾಭಾರತಿ19 April 2016 10:08 PM IST
share
ಹಣವೇ ಸರ್ವಸ್ವ ಎಂಬ ಮನೋಭಾವ ತೊಲಗಲಿ: ವಿಮರ್ಶಕ ಟಿ.ಪಿ.ಅಶೋಕ್

ಶಿವಮೊಗ್ಗ,ಎ.19: ಕೇವಲ ಹಣದಿಂದ ಎಲ್ಲವನ್ನೂ ಸೃಷ್ಟಿಸಬಹುದು ಎಂಬ ಮನೋಭಾವ ಹೆಚ್ಚಾಗುತ್ತಿದೆ. ಇದರಿಂದಾಗಿ ನೆಮ್ಮದಿ, ವೌಲ್ಯ, ಸಂಬಂಧ, ನಂಬಿಕೆ, ನೈತಿಕತೆ ಕಡಿಮೆಯಾಗುತ್ತಿದೆ. ಜೊತೆಗೆ ಭಾಷೆಯ ಅಸ್ತಿತ್ವವನ್ನೂ ಸಹ ಕಳೆದುಕೊಳ್ಳುತ್ತಿದ್ದೇವೆ ಎಂದು ವಿಮರ್ಶಕ ಟಿ.ಪಿ.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳವಾರ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಹೊಸ ಕಾಲ ಹೊಸ ಕಥನ (ಕನ್ನಡದ ಇತ್ತೀಚಿನ ಕಥೆಗಳ ಓದು) ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗೀಕರಣ ಮತ್ತು ಔದ್ಯಮೀಕರಣದಿಂದ ಪ್ರಸ್ತುತ ಪರಿಸ್ಥಿತಿ ಸಂಕೀರ್ಣವಾಗಿದೆ. ಬದಲಾವಣೆಯ ಪಲ್ಲಟ ಶುರುವಾಗಿದೆ. ಇದನ್ನರಿಯಲು ಹೊಸ ಪ್ರತಿಭೆ ಮತ್ತು ವಿಚಾರಧಾರೆಗಳು ಅಗತ್ಯವಾಗಿದೆ ಎಂದರು. ಜಾಗತೀಕರಣ, ಮುಕ್ತಮಾರುಕಟ್ಟೆ ಮತ್ತು ನವಬಂಡವಾಳ ಶಾಹಿ ವ್ಯವಸ್ಥೆಯು ಆಧುನಿಕತೆಯ ಮೇಲೆ ಸವಾರಿ ಮಾಡುತ್ತಿವೆ. ಹುಲಿಯ ಮೇಲೆ ಸವಾರಿ ಮಾಡುವಂತಹ ಸ್ಥಿತಿಯಲ್ಲಿ ದೇಶವಿದೆ. ಈ ಎಲ್ಲ್ಲ ಪರಿಸ್ಥಿತಿಗಳನ್ನು ಕೈಯಾರೇ ತಂದುಕೊಂಡು ಗೋಜಲು ವ್ಯವಸ್ಥೆಯನ್ನು ಸೃಷ್ಟಿಸಿಕೊಂಡಿದ್ದೇವೆ. ಆರ್ಥಿಕ ಲಾಭವೊಂದೇ ಮುಖ್ಯವಾಗಿರುವುದು ಈ ವೈರುಧ್ಯಗಳಿಗೆ ಕಾರಣವಾಗಿದೆ ಎಂದರು. ವಿಷ ವರ್ತುಲ: ಹೊಸತನಕ್ಕೆ ತೆರೆದುಕೊಂಡಿರುವ ನಾವು ಜಾತಿ ವ್ಯವಸ್ಥೆಯ ವಿಷ ವರ್ತುಲದಲ್ಲಿ ಸಿಲುಕಿ ಹಾಕಿಕೊಂಡಿದ್ದೇವೆ. ದಲಿತರ ಬಗ್ಗೆ ಈಗ ಚಿಂತನೆ ಆರಂಭವಾಗಿದೆ. ಹೊಸ ಕಾಲದ ವಿದ್ಯಮಾನಗಳು ನಿರ್ಣಯಾತ್ಮಕವಾಗುವಂತಾಗಿದೆ. ಇದು ಯೋಚನಾಕ್ರಮ ಮತ್ತು ಜೀವನ ಕ್ರಮವನ್ನು ಬದಲಿಸುತ್ತಿವೆ. ಆದ್ದರಿಂದ ಈ ಶತಮಾನದ ಸಮಾಜ ಮತ್ತು ಸಂಸ್ಕೃತಿ ನಿರ್ಣಯಾತ್ಮಕವಾಗಿದೆ ಎಂದು ವಿಶ್ಲೇಶಿಸಿದರು.

ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನೂ ಸಹ ಖಾಸಗೀಕರಣ ಮಾಡುವ ನಿರ್ಧಾರಕ್ಕೆ ಬಂದು ತಲುಪಿದ್ದೇವೆ. ಎಲ್ಲವನ್ನೂ ರಾಷ್ಟ್ರೀಕರಣ ಮಾಡುವ ಬದಲು ಖಾಸಗೀಕರಣ ಮಾಡತೊಡಗಿದ್ದೇವೆ. ಇದರಿಂದ ಈಗಿನ ಪರಿಸ್ಥಿತಿ ತುಂಬಾ ಸಂಕೀರ್ಣವಾಗಿದೆ ಎಂದು ವಿವರಿಸಿದರು.

ವಿಚಾರ ಸಂಕಿರಣದಲ್ಲಿ ಕಥೆಗಾರರಾದ ವಿವೇಕ ಶಾನಬಾಗ, ವಸುಧೇಂದ್ರ, ಮಾಧವ ಚಿಪ್ಪಳಿ ಇವರು ಹೊಸ ಕಥನಗಳ ಬಗ್ಗೆ ವಿಷಯ ಮಂಡಿಸಿದರು. ಇನ್ನೊಬ್ಬ ಕಥೆಗಾರ ವೌನೇಶ್ ಬಡಿಗೇರ್ ಕಥಾವಾಚನ ನಡೆಸಿ ಸಂವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X